ಕೋಳಿ ಸಾಕಾಣಿಕೆ ಮಾಡಬೇಕು ಅನ್ನೋರಿಗೆ ಗುಡ್ ನ್ಯೂಸ್; ಊಟ ವಸತಿಯೊಂದಿಗೆ ಸಿಗಲಿದೆ ಉಚಿತ ತರಬೇತಿ

ಸ್ವಂತ ವಾಗಿ ಏನಾದ್ರೂ ವ್ಯಾಪಾರ ವ್ಯವಹಾರ ಶುರು ಮಾಡಬೇಕು.. ನಮ್ದೇ ಅದ ರೀತಿಯಲ್ಲಿ ಜೀವನ ಸಾಗಿಸಬೇಕು, ಆಸಕ್ತಿ ಕ್ಷೇತ್ರದಲ್ಲೇ ಏನಾದ್ರೂ ಸಾಧಿಸಬೇಕು ಅನ್ನೋರಿಗೆ ಇದೀಗ ಗುಡ್ ನ್ಯೂಸ್ ಬಂದಿದೆ. ಹೌದು ಸಣ್ಣದಾಗಿ ಉದ್ಯೋಗ ವ್ಯಾಪಾರ ವ್ಯವಹಾರ ಮಾಡಬೇಕು ಅನ್ನೋರಿಗೆ ಇಲ್ಲಿದೆ ಸಿಹಿ ಸುದ್ದಿ. ಹೌದು ಕುರಿ, ಕೋಳಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನೀಡಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ. ರೈತರಿಗೆ, ರೈತ ಮಹಿಳೆಯರಿಗೆ ಹಾಗೂ ಆಸಕ್ತಿಯುಳ್ಳ ಎಲ್ಲರಿಂದ ಕುರಿ, ಕೋಳಿ, ಮೇಕೆ ಸೇರಿದಂತೆ ಆಧುನಿಕ ಹೈನುಗಾರಿಕೆ ತರಬೇತಿ ನೀಡಲಾಗುವುದು. ಹೌದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ತರಬೇತಿ ನೀಡಲಾಗುತ್ತಿದ್ದೂ ಆಸಕ್ತಿಯುಳ್ಳವರು ತರಭೇತಿಯ ಲಾಭ ಪಡೆಯಲು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

WhatsApp Group Join Now
Telegram Group Join Now

ಇನ್ನು ಕುರಿ ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಹೈನುಗಾರಿಕೆ ಸೇರಿದಂತೆ ಪಶುಪಾಲನೆ ಕುರಿತಂತೆ ರೈತರು ಮನೆಯಲ್ಲಿಯೇ ಕುಳಿತು ಮಾಹಿತಿ ಪಡೆಯಬಹುದು. ಹೀಗಾಗಿ ಮನೆಯಿಂದಲೇ ಈ ಕುರಿತಂತೆ ಮಾಹಿತಿಯನ್ನ ಪಡೆದು ಅರ್ಜಿಯನ್ನ ಸಲ್ಲಿಸಬಹುದಾಗಿದೆ ಮುಖ್ಯವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯ ಲಾಭ ಪಡೆಯಲು ಅರ್ಜಿಯನ್ನ ಸಲ್ಲಿಸೋದು ಹೇಗೆ?? ಎಲ್ಲಿ ಅರ್ಜಿ ಸಲ್ಲಿಸೋದು? ಬೇಕಾದ ದಾಖಲೆಗಳೇನು? ಅರ್ಜಿ ಸಲ್ಲಿಸಲು ಕೊನೆ ದಿನ ಇದೆಲ್ಲದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡೋಣ ಬನ್ನಿ.

ಅರ್ಜಿ ಸಲ್ಲಿಸೋದು ಹೇಗೆ ಕೊನೆ ದಿನ ಯಾವಾಗ?

ಹೌದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಆಗಾಗ ಇದೆ ತೆರೆನಾದ ಉಚಿತ ತರಭೇತಿ ಯೋಜನೆಗಳನ್ನ ನಡೆಸುತ್ತ ಬಂದಿದೆ. ಇದೀಗ ಶ್ರೀ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ ಜೊತೆಯಾಗಿ ಎರಡರ ಜಂಟಿ ಸಹಯೋಗದಲ್ಲಿ ರುಡ್ಸೆಟ್ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆ ತರಭೇತಿಯನ್ನ ಹಮ್ಮಿಕೊಳ್ಳಲಾಗಿದೆ. ಹೌದು ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಗೆ ಇದೀಗ ಆಸಕ್ತ ಎಲ್ಲರಿಂದಲೂ ಕೂಡ ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಕಯಾರು ಬೇಕಾದ್ರೂ ಅರ್ಜಿ ಸಲ್ಲಿಸಬಹುದಾಗಿದೆ. ಆದ್ರೆ ಮುಖ್ಯವಾಗಿ ತರಭೇತಿಯಲ್ಲಿ ಹಾಗೂ ಕೋಳಿ ಸಾಕಾಣಿಕೆಯಲ್ಲಿ ಆಸಕ್ತಿಯನ್ನ ಹೊಂದಿರಬೇಕು.

ಇನ್ನು ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಹೌದು 18 ವರ್ಷದಿಂದ 45 ವರ್ಷದ ಒಳಗಿನ ಯಾರು ಬೇಕಾದ್ರು ತರಭೇತಿಯ ಲಾಭ ಪಡೆಯಬಹುದು. ಇದರ ಜೊತೆಗೆ ಸ್ಥಳೀಯ ಕನ್ನಡ ಭಾಷೆಯ ಜ್ಞಾನ ಚೆನ್ನಾಗಿರಬೇಕು. ಇನ್ನು ಅಭ್ಯರ್ಥಿಗಳು ಆಧಾರ್ ಕಾರ್ಡ್ ಗಳನ್ನು ಹೊಂದಿರಬೇಕು. ಅದರಲ್ಲೂ ಮುಖ್ಯವಾಗಿ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಇನ್ನು ಕೋಳಿ ಸಾಕಾಣಿಕೆ ತರಭೇತಿಯ ಲಾಭ ಪಡೆಯಬೇಕು ಅಂದರೆ ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿದ್ದು ಜುಲೈ 2ನೇ ತಾರೀಕಿನ ಒಳಗಾಗಿ ಅರ್ಜಿಯನ್ನ ಸಲ್ಲಿಸಬಹುದು. ಇನ್ನು ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇವರ ಮೊಬೈಲ್ ಸಂಖ್ಯೆ 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಶಾಖೆ, ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ. ಇನ್ನು ತರಭೇತಿ ಪಡೆಯಲು ಅರ್ಜಿ ಸಲ್ಲಿಸಿ ಆಯ್ಕೆಯಾದಂತ ಎಲ್ಲ ತರಭೇತಿ ಪಡೆಯುವ ಪ್ರತಿಯೊಬ್ಬ ಆಸಕ್ತಿಯುಳ್ಳವರಿಗೂ ಸಹ ಸಂಸ್ಥೆಯ ಕಡೆಯಿಂದ ಕೆಲವೊಂದು ಸೌಲಭ್ಯಗಳನ್ನ ನೀಡಲಾಗುತ್ತಿದ್ದೂ ಅದರಲ್ಲಿ ಮುಖ್ಯವಾಗಿ ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು. ಜೊತೆಗೆ, ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಇದರ ಆಧಾರವಾಗಿ ಮುಂದೆ ನೀವು ಉದ್ಯೋಗ ವ್ಯಾಪಾರವನ್ನ ಶುರು ಮಾಡಬಹುದಾಗಿದೆ.. ಈಗಾಗಿ ಅಗತ್ಯವಿರುವ ಆಸಕ್ತರು ಪ್ರತಿಯೊಬ್ಬರೂ ಕೊಡ ತರಭೇತಿಯ ಲಾಭ ಪಡೆಯಬಹುದಾಗಿದೆ. ಈಗಾಗಿ ಜುಲೈ 2ರ ಒಳಗಾಗಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ವಿವಿಧ ಯೋಜನೆಗಳ ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿಗೆ ಅರ್ಜಿ ಆಹ್ವಾನಿಸಲಾಗಿದೆ.

Sharing Is Caring:

Leave a Comment